ಶ್ರೀಗಳ ಹುಟ್ಟುಹಬ್ಬದ ಪ್ರಯುಕ್ತ ಸಂಭ್ರಮಾಚರಣೆ: ಸಿರುಗುಪ್ಪ
Wednesday, May 11th, 2011 - Vishveshavani - 5 Commentsದಿನಾಂಕ ೧೧.೦೫.೨೦೧೧ರಂದು ಬಳ್ಳಾರಿ ಜಿಲ್ಲೆಯಲ್ಲಿನ ಸಿರುಗುಪ್ಪದಲ್ಲಿ ಆರ್ಯವೈಶ್ಯ ಮಂಡಳಿಯ ವತಿಯಿಂದ ಶ್ರೀಶ್ರೀವಿಶ್ವೇಶತೀರ್ಥಶ್ರೀಪಾದರ ೮೦ನೇ ಹುಟ್ಟುಹಬ್ಬದ ನಿಮಿತ್ತ ಶ್ರೀಗಳಿಗೆ ತುಲಾಭಾರ, ಮುತ್ತಿನ ಅಭಿಷೇಕ ಹಾಗೂ ಧನ್ವಂತರಿ ಹೋಮಗಳನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮವು ತುಂಬಾ ವಿಜೃಂಭಣೆಯಿಂದ ನೆರವೇರಿತು. ಕುದುರೆಯ ಗಾಡಿಯಲ್ಲಿ ಶ್ರೀಗಳನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಭವ್ಯವಾದ ವೇದಿಕೆಯಲ್ಲಿ ಶ್ರೀನಿವಾಸ ಕಲ್ಯಾಣ ಹಾಗೂ ಶ್ರೀಗಳಿಗೆ ತುಲಾಭಾರ ಸಾವಿರಾರು ಜನರ ಸಮ್ಮುಖದಲ್ಲಿ ಬಹು ಅದ್ದೂರಿಯಾಗಿ ನೆರವೇರಿತು. ಭಕ್ತಾದಿಗಳು ಶ್ರೀಗಳಿಗೆ ಪಾದಪೂಜೆಯನ್ನು ನೆರವೇರಿಸಿದರು. ಶ್ರೀಗಳು ನೆರೆದಿದ್ದ ಭಕ್ತರಿಗೆಲ್ಲಾ ಫಲಮಂತ್ರಾಕ್ಷತೆಯನ್ನಿತ್ತು ಅನುಗ್ರಹಿಸಿದರು.











